ಕೊಳ್ಳೇಗಾಲ. ನೂತನವಾಗಿ ಸಚಿವರಾಗಿಪ್ರಮಾಣ ವಚನ ಸ್ವೀಕರಿಸಿ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ್ದ ಸಿ.ಪುಟ್ಟರಂಗಶೆಟ್ಟಿ ಅವರು ಕೊಳ್ಳೇಗಾಲ ಪಟ್ಟಣದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.ಈ ವೇಳೆ ನೂತನ ಸಚಿವ ಪುಟ್ಟರಂಗಶೆಟ್ಟಿ ರವರಿಗೆ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ಹಾಗೂ ಕಾಂಗ್ರೇಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾರ, ಶಾಲು ಹಾಕಿ ಸನ್ಮಾನಿಸಿ ಗೌರವಿಸಿ ಅಭಿನಂದಿಸಿದರು.

ಮುಖ್ಯಮಂತ್ರಿಗಳು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಪ್ರವಾಸ ಮಾಡಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ ಅದರಂತೆ ಎಲ್ಲಾ ತಾಲೂಕುಗಳಿಗೆ ಭೇಟಿ ನೀಡಿ ಶಾಸಕರ ಜೊತೆ ಸಮಾಲೋಚನೆ ಮಾಡಿ ಸರಕಾರಕ್ಕೆ ವರದಿ ಸಲ್ಲಿಸುತ್ತೇನೆ. ಯಾವುದೇ ಖಾತೆ ಕೊಟ್ಟರು ಸಮರ್ಥವಾಗಿ ನಿರ್ವಹಿಸುತ್ತೇನೆ – ಸಿ ಪುಟ್ಟರಂಗಶೆಟ್ಟಿ ನೂತನ ಸಚಿವರು
ಶಾಸಕ ಎ.ಆರ್.ಕೃಷ್ಣಮೂರ್ತಿ, ಚಾಮುಲ್ ಅಧ್ಯಕ್ಷರು ನಂಜುಂಡಸ್ವಾಮಿ, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರು ರಾಜೇಂದ್ರ, ಉಪ್ಪಾರ ನಿಗಮ ಮಾಜಿ ಅಧ್ಯಕ್ಷರು ಮಧುವನಹಳ್ಳಿ ಶಿವಕುಮಾರ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರು ತೋಟೇಶ್, ಕಾರ್ಯದರ್ಶಿ ಬಸ್ತೀಪುರ ರವಿ, ಜಿ.ಪಂ ಮಾಜಿ ಸದಸ್ಯರು ಕೊಪ್ಪಾಳಿ ಮಹದೇವನಾಯಕ, ಹನೂರು ಬ್ಲಾಕ್ ಅಧ್ಯಕ್ಷರು ಮುಕುಂದವರ್ಮ, ಉಪ್ಪಾರ ಸಂಘ ಅಧ್ಯಕ್ಷ ರಮೇಶ್, ಲೋಕೇಶ್ ನಂಜುಂಡಸ್ವಾಮಿ, ನಗರಸಭೆ ಮಾಜಿ ಅಧ್ಯಕ್ಷರು ರೇಖಾ ರಮೇಶ್, ಬಸ್ತೀಪುರ ಶಾಂತರಾಜು, ಮಲ್ಲಿಕಾರ್ಜುನ, ಮಾಜಿ ಸದಸ್ಯರು ಮುಡಿಗುಂಡ ಶಾಂತರಾಜು ಧರಣೇಶ್, ಸುಮಾಸುಬ್ಬಣ್ಣ, ಅಂಬೇಡ್ಕರ್ ಸಂಘದ ಅಧ್ಯಕ್ಷ ಆನಂದಮೂರ್ತಿ, ಮುಖಂಡರು ಶೇಖರ್ ಬುದ್ದ ಹಾಗೂ ಇತರರು ಇದ್ದರು.